ಸೆ.೧೭ರಂದು ಕಲ್ಯಾಣ ಕರ್ನಾಟಕ ಉತ್ಸವ; ಹಬ್ಬದ ಆಚರಣೆಗೆ ಸಕಲ ಸಿದ್ಧತೆ ಕೈಗೊಳ್ಳಿ: ಎಡಿಸಿ ಮಹಮ್ಮದ್ ಝುಬೇರ್

Eshanya Times
WhatsApp Group Join Now

ಬಳ್ಳಾರಿ,ಸೆ.೦೬:
ಭಾರತ ಆ. ೧೫ ರಂದು ಸ್ವಾತಂತ್ರ‍್ಯ ಪಡೆದರೆ, ಕಲ್ಯಾಣ ಕರ್ನಾಟಕ ಭಾಗದ ಪ್ರದೇಶಗಳು ಸೆ.೧೭ರಂದು ವಿಮೋಚನೆಗೊಂಡ ದಿನ. ಹಾಗಾಗಿ ಜಿಲ್ಲಾ ಕೇಂದ್ರದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನವಾಗಿ ಆಚರಿಸಲಾಗುತ್ತಿದ್ದು, ಆಚರಣೆಯು ಹಬ್ಬದಂತಿರಬೇಕು, ಇದಕ್ಕೆ ಬೇಕಾದ ಎಲ್ಲ ರೀತಿಯ ಸಿದ್ಧತೆಗಳನ್ನು ಸಮರ್ಪಕವಾಗಿ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಜುಬೇರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ನೂತನ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ಅಂಗವಾಗಿ ಶುಕ್ರವಾರ ಏರ್ಪಡಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸೆ. ೧೭ ಹೈದ್ರಾಬಾದ್ ನ ನಿಜಾಮರಿಂದ ಹೈದ್ರಾಬಾದ್ ಕರ್ನಾಟಕ ಪ್ರದೇಶಗಳು ವಿಮುಕ್ತಿ ಪಡೆದ ದಿನವಾಗಿದ್ದು, ಇದನ್ನು ಸರ್ಕಾರದ ಸೂಚನೆಯಂತೆ ಕಲ್ಯಾಣ ಕರ್ನಾಟಕ ಉತ್ಸವ ದಿನವಾಗಿ ಆಚರಿಸಲಾಗುತ್ತಿದೆ. ಸೆ.೧೭ ರಂದು ಬೆಳಿಗ್ಗೆ ೦೯ ಗಂಟೆಗೆ ನಗರದ ಡಾ.ರಾಜ್‌ಕುಮಾರ್ ರಸ್ತೆಯ ಸರ್ಕಾರಿ (ಮಾಜಿ ಪುರಸಭೆ) ಪದವಿ ಪೂರ್ವ ಕಾಲೇಜಿನ ಮೈದಾನದ ಆವರಣದಲ್ಲಿ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಲಿದೆ ಎಂದರು.
ಕಲ್ಯಾಣ ಕರ್ನಾಟಕ ಉತ್ಸವವನ್ನು ಜಿಲ್ಲಾಡಳಿತದ ವತಿಯಿಂದ ಅತ್ಯಂತ ಅರ್ಥಪೂರ್ಣ ಹಾಗೂ ವಿಜೃಂಭಣೆಯಿAದ ಆಚರಿಸುವ ನಿಟ್ಟಿನಲ್ಲಿ ಸ್ವಾಗತ ಸಮಿತಿ, ವೇದಿಕೆ ಸಮಿತಿ, ಸನ್ಮಾನ ಸಮಿತಿ, ಸ್ವಚ್ಛತೆ ಮತ್ತು ಕುಡಿಯುವ ನೀರಿನ ಸಮಿತಿ, ವಿದ್ಯುತ್ ಸಮಿತಿ, ದೀಪಾಲಂಕಾರ ಸಮಿತಿ, ಲಘು ಉಪಹಾರ ಸಮಿತಿ ಸೇರಿದಂತೆ ವಿವಿಧ ಸಮಿತಿಗಳನ್ನು ರಚಿಸಿ, ಜವಾಬ್ದಾರಿಗಳನ್ನು ವಹಿಸಿ, ಅಗತ್ಯ ಸಲಹೆ-ಸೂಚನೆಗಳನ್ನು ಇದೇ ಸಂದರ್ಭದಲ್ಲಿ ನೀಡಿದರು.
ಕಲ್ಯಾಣ ಕರ್ನಾಟಕ ಉತ್ಸವ ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ವಿವಿಧ ಇಲಾಖೆಗಳಿಗೆ ವಹಿಸಲಾದ ಜವಾಬ್ದಾರಿಯನ್ನು ಅತ್ಯಂತ ಸಮರ್ಪಕವಾಗಿ ನಿರ್ವಹಿಸುವಂತೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಶಾಲಾ ಕಾಲೇಜುಗಳಲ್ಲಿ ೩೭೧ ಜೆ ಕುರಿತು ಪ್ರಬಂಧ ಆಯೋಜಿಸಬೇಕು ಮತ್ತು ಎಲ್ಲಾ ಶಾಲಾ-ಕಾಲೇಜುಗಳಿಂದ ವಿದ್ಯಾರ್ಥಿಗಳು ಕಲ್ಯಾಣಕರ್ನಾಟಕ ಉತ್ಸವದಲ್ಲಿ ಭಾಗವಹಿಸುವಂತೆ ನೋಡಿಕೊಳ್ಳಿ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಅಪರ ಜಿಲ್ಲಾಧಿಕಾರಿಗಳು ಈ ಸಂದರ್ಭದಲ್ಲಿ ಸೂಚಿಸಿದರು.
ಕುಡಿಯುವ ನೀರಿನ ವ್ಯವಸ್ಥೆ, ಶ್ಯಾಮಿಯಾನ, ಕುರ್ಚಿ ಮತ್ತು ಲಘು ಉಪಹಾರದ ವ್ಯವಸ್ಥೆ ಹಾಗೂ ಮೈದಾನದ ಸ್ವಚತೆಯ ಕೈಗೊಳ್ಳುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮ ನಡೆಯುವ ಮೈದಾನದಲ್ಲಿ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಿಗೆ ಸೂಚಿಸಿದ ಅವರು, ಕಲ್ಯಾಣ ಕರ್ನಾಟಕ ಉತ್ಸವ ದಿನದಂದು ಜರುಗಲಿರುವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಹೆಚ್ಚಿನ ಸÀಂಖ್ಯೆಯಲ್ಲಿ ಜನರು ಸೇರುವುದರಿಂದ ವಾಹನ ಸಂಚಾರ ಕ್ರಮಬದ್ಧಗೊಳಿಸಲು ಹಾಗೂ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಲು ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆಯ ಕುರಿತು ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ವಿಶೇಷ ಉಪನ್ಯಾಸ ಆಯೋಜಿಸಬೇಕು. ಶಿಷ್ಟಾಚಾರದನ್ವಯ ಆಹ್ವಾನ ಪತ್ರಿಕೆ ಮುದ್ರಿಸಿ, ಗಣ್ಯರನ್ನು ಮತ್ತು ವಿವಿಧ ಸಂಘ- ಸಂಸ್ಥೆಗಳ ಪದಾಧಿಕಾರಿಗಳನ್ನು ಆಹ್ವಾನಿಸಬೇಕು ಎಂದು ಸೂಚಿಸಿದರು.
ಜಿಲ್ಲೆಯ ಎಲ್ಲಾ ತಾಲೂಕು ಮಟ್ಟದಲ್ಲಿಯೂ ಕಲ್ಯಾಣ ಕರ್ನಾಟಕ ಉತ್ಸವ ಆಚರಿಸಲು ಆಯಾ ತಾಲೂಕು ಮಟ್ಟದ ತಹಸೀಲ್ದಾರರು ಹಾಗೂ ಇಲಾಖಾ ಅಧಿಕಾರಿಗಳು ಕ್ರಮ ವಹಿಸಬೇಕು. ಜಿಲ್ಲಾ ಮಟ್ಟದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಬೇಕು ಎಂದರು.
ಈ ಸಂದರ್ಭದಲ್ಲಿ ಸಹಾಯಕ ಆಯುಕ್ತ ಪ್ರಮೋದ್, ಬಳ್ಳಾರಿ ನಗರ ಡಿವೈಎಸ್ಪಿ ನಂದಾರೆಡ್ಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Group Join Now
Telegram Group Join Now
Share This Article

Eshanya Times, Regional Kannada Daily is a leading news paper in Kalyana Karnataka (North Karnataka). Which is having large number of circulation in the districts of Raichur, Koppla, Bellary, Yadgir, Gulbarga, Bidar, Vijayanagara, Bagalkote and in the capital city of Bangalore.

This News Paper having Registred Office in Raichur City, Karnataka State.

The main mooto of the Eshanya Times news paper is to serve the nation and to give wide publicity of Government Developmental programmes and policies which are execuited in Government and also to give social justice to the people of Karnataka.

Copyright © 2024. Eshanya Times.  All Rights Reserved,

Powered By KhushiHost
24/7 Help Desk Support – Call Now +919060329333 

error: Content is protected !!