ಕಲ್ಯಾಣ ಕರ್ನಾಟಕದಲ್ಲಿ ಆರೋಗ್ಯ ಆವಿಷ್ಕಾರ ಅರೋಗ್ಯ ಸುಧಾರಣೆಗೆ ೩೦೦ ಕೋಟಿ ರೂ. ಮೀಸಲು -ಡಾ.ಅಜಯ್ ಸಿಂಗ್

Eshanya Times
WhatsApp Group Join Now

ಕಲಬುರಗಿ,ಮಾ.೨:

ಕಲ್ಯಾಣ ಕರ್ನಾಟಕ ಭಾಗದಲ್ಲಿನ ಅಪೌಷ್ಟಿಕತೆ ನಿವಾರಣೆ ಮತ್ತು ಆರೋಗ್ಯ ಸೌಕರ್ಯ ಹೆಚ್ಚಿಸಲು ಪ್ರಸಕ್ತ ವರ್ಷ ಮಂಡಳಿಯು “ಆರೋಗ್ಯ ಆವಿಷ್ಕಾರ” ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇದಕ್ಕಾಗಿ ೨೫೦ ರಿಂದ ೩೦೦ ಕೋಟಿ ರೂ. ಅನುದಾನ ಮೀಸಲಿರಿಸಿದೆ ಎಂದು ಕೆ.ಕೆ.ಆರ್.ಡಿ.ಬಿ. ಅಧ್ಯಕ್ಷ ಡಾ.ಅಜಯ್ ಸಿಂಗ್ ಹೇಳಿದರು.

ಶನಿವಾರ ಇಲ್ಲಿನ ಕೆ.ಕೆ.ಆರ್.ಡಿ.ಬಿ ಮಂಡಳಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಪ್ರದೇಶದ ೭ ಜಿಲ್ಲೆಗಳಲ್ಲಿ ೭೦ ಪಿ.ಎಚ್.ಸಿ.ಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಪ್ರಸಕ್ತ ಸಾಲಿನ ಆಯವ್ಯಯದಲ್ಲಿ ೨೨೧ ಕೋಟಿ ರೂ. ವೆಚ್ಚದಲ್ಲಿ ೪೬ ಪ್ರಾಥಮಿಕ ಅರೋಗ್ಯ ಕೇಂದ್ರ ತೆರೆಯಲು ಸರ್ಕಾರ ಘೋಷಿಸಿದ್ದು, ಇದರಲ್ಲಿ ೩೩ಕ್ಕೆ ಮಂಡಳಿ ಅನುದಾನ ನೀಡಲಿದೆ. ಉಳಿದ ಆಸ್ಪತ್ರೆಗೆ ಆರೋಗ್ಯ ಇಲಾಖೆ, ವಿಜಯನಗರ ಜಿಲ್ಲೆಯಲ್ಲಿ ಮಿನರಲ್ ಫಂಡ್‌ನಿAದ ಹಣ ಪಡೆಯಲಾಗುತ್ತದೆ ಎಂದರು.

ರಾಜ್ಯದ ಗಾಮೀಣ ಪ್ರದೇಶದಲ್ಲಿ ವಿಭಾಗವಾರು ಪಿ.ಎಚ್.ಸಿ. ಸಂಖ್ಯೆ ಗಮನಿಸಿದಾಗ ಬೆಂಗಳೂರು ವಿಭಾಗದಲ್ಲಿ ೧.೧೩ ಕೋಟಿ ಜನಸಂಖ್ಯೆಗೆ ೬೪೬, ಬೆಳಗಾವಿ ವಿಭಾಗದಲ್ಲಿ ೧.೧೮ ಕೋಟಿ ಜನಸಂಖ್ಯೆಗೆ ೪೫೫, ಮೈಸೂರು ವಿಭಾಗದಲ್ಲಿ ೯೪.೯೫ ಲಕ್ಷ ಜನಸಂಖ್ಯೆಗೆ ೬೫೯ ಪ್ರಾಥಮಿಕ ಆರೋಗ್ಯ ಕೇಂದ್ರಗಳಿದ್ದರೆ, ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ೧.೦೮ ಕೋಟಿ ಜನಸಂಖ್ಯೆಗೆ ೩೩೩ ಪಿ.ಎಚ್.ಸಿ. ಇವೆ. ಇವು ಇತರೆ ಭಾಗಕ್ಕಿಂತ ತುಂಬಾನೆ ಕಡಿಮೆ ಇದೆ. ಇದು ಸಹ ಆರೋಗ್ಯ ಕ್ಷೇತ್ರದಲ್ಲಿ ಪ್ರದೇಶ ಹಿಂದುಳಿಯಲು ಕಾರಣವಾಗಿದ್ದು, ಈ ಅಂತರವನ್ನು ಕಡಿಮೆ ಮಾಡಲು ಪಿ.ಎಚ್.ಸಿ. ಸ್ಥಾಪಿಸಲಾಗುತ್ತಿದೆ ಎಂದರು.

ಪ್ರದೇಶದಲ್ಲಿ ಅಪೌಷ್ಠಿಕತೆ ನಿವಾರಣೆ, ತಾಯಿ-ಶಿಶು ಮರಣ ತಗ್ಗಿಸುವುದು ಸೇರಿದಂತೆ ಆರೋಗ್ಯ ಸಮಸ್ಯೆ ಸುಧಾರಣೆಗಳ ಅಧ್ಯಯನಕ್ಕೆ ರಾಯಚೂರಿನಲ್ಲಿ ೪೮ ಕೊಟಿ ರೂ. ವೆಚ್ಚದಲ್ಲಿ ಹ್ಯೂಮನ್ ಜಿನೋಮ್ ಸೆಂಟರ್ ಸ್ಥಾಪನೆ, ತಲಾ ೧೪ ಕೋಟಿ ರೂ. ವೆಚ್ಚದಲ್ಲಿ ೧೭ ಸಮುದಾಯ ಆರೋಗ್ಯ ಕೇಂದ್ರ ನಿರ್ಮಿಸಲಾಗುತ್ತಿದೆ. ೪೧ ಬಿ.ಎಲ್.ಎಸ್., ೭ ಎ.ಎಲ್.ಎಸ್. ಅತ್ಯಾಧುನಿಕ ಅಂಬುಲೆನ್ಸ್ಗಳನ್ನು ಖರೀದಿಗೆ ಟೆಂಡರ್ ಪ್ರಕ್ರಿಯೆ ನಡೆದಿದ್ದು, ಇದಕ್ಕಾಗಿ ಪ್ರಾದೇಶಿಕ ನಿಧಿಯಡಿ ೧೬.೪೦ ಕೋಟಿ ರೂ. ಖರ್ಚು ಮಾಡಲಾಗುತ್ತಿದೆ. ಮಹಿಳೆಯರಲ್ಲಿ ಶುಚಿತ್ವ ಮತ್ತು ನೈರ್ಮಲ್ಯ ಕಾಪಾಡುವ ಉದ್ದೇಶದಿಂದ ಮೆನ್ಸಟ್ರೂಯಲ್ ಕಪ್ ವಿತರಣೆಗೆ ೨.೧೦ ಕೊಟಿ ರೂ. ವ್ಯಯ ಮಾಡಲಾಗುತ್ತಿದೆ. ಕಲಬುರಗಿಯಲ್ಲಿ ಆರೋಗ್ಯ ಸೌಧ ನಿರ್ಮಾಣಕ್ಕೆ ೧೦ ಕೋಟಿ ರೂ. ಮೀಸಲಿರಿಸಿದೆ. ಡಾ.ಡಿ.ಎಂ. ನಂಜುAಡಪ್ಪ ವರದಿಯಲ್ಲಿ ಶಿಕ್ಷಣ, ಆರೋಗ್ಯ, ಪರಿಸರಕ್ಕೆ ಹೆಚ್ಚಿನ ಒತ್ತು ನೀಡಲು ತಿಳಿಸಿದ್ದು, ಅದರಂತೆ ಪ್ರಸಕ್ತ ೨೦೨೩-೨೪ನೇ ಸಾಲಿನಲ್ಲಿ ಮಂಡಳಿಯು ಅಕ್ಷರ ಆವಿಷ್ಕಾರಕ್ಕೆ ೭೫೦ ಕೋಟಿ ರೂ. ಮತ್ತು ಆರೋಗ್ಯ ಆವಿಷ್ಕಾರಕ್ಕೆ ಸುಮಾರು ೩೦೦ ಕೋಟಿ ರೂ. ಖರ್ಚು ಮಾಡುತ್ತಿದೆ. ಒಟ್ಟಾರೆಯಾಗಿ ಪ್ರದೇಶದ ೪೧ ವಿಧಾನಸಭಾ ಕ್ಷೇತ್ರಕ್ಕೆ ಸುಮಾರು ೫೦ ರಿಂದ ೭೫ ಕೋಟಿ ರೂ. ವರೆಗೆ ಹಣ ಖರ್ಚು ಮಾಡಲಾಗುತ್ತಿದೆ ಎಂದರು.

ಪ್ರಸಕ್ತ ೨೦೨೩-೨೪ನೇ ಸಾಲಿಗೆ ಹಂಚಿಕೆಯಾದ ೩,೦೦೦ ಕೋಟಿ ರೂ. ಅನುದಾನದಲ್ಲಿ ೨,೬೦೦ ಕೋಟಿ ರೂ. ಅನುದಾನಕ್ಕೆ ಈಗಾಗಲೆ ಮಂಡಳಿ ಅನುಮೋದನೆ ನೀಡಿದೆ. ಮುಂದಿನ ೨೦೨೪-೨೫ನೇ ಸಾಲಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ೫,೦೦೦ ಕೋಟಿ ರೂ. ಆಯವ್ಯಯದಲ್ಲಿ ಘೋಷಿಸಿ ಅಷ್ಟು ಹಣ ನೀಡುವುದಾಗಿ ತಿಳಿಸಿದ್ದಾರೆ. ಈ ನಿಟ್ಟಿನಲ್ಲಿ ಬರುವ ಮೇ ಒಳಗೆ ಶಾಸಕರಿಂದ ಕ್ರಿಯಾ ಯೋಜನೆ ಪಡೆಯಲಾಗುವುದು ಎಂದರು.

ಹೃದಯಾಘಾತ ಚಿಕಿತ್ಸೆಗೆ ತಂತ್ರಾAಶ ಅಭಿವೃದ್ಧಿ: ಹೈದಯಾಘಾತವಾದಾಗ ಗೋಲ್ಡನ್ ಹವರ್‌ನಲ್ಲಿ ಚಿಕಿತ್ಸೆ ಅವಶ್ಯಕ. ಈ ನಿಟ್ಟಿನಲ್ಲಿ ಪ್ರದೇಶದ ಗ್ರಾಮೀಣ ಭಾಗದ ಜನರು ಹೃದಯಾಘಾತಕ್ಕೆ ಒಳಗಾದ ಸಂದರ್ಭದಲ್ಲಿ ಪಿ.ಎಚ್.ಸಿ ಯಿಂದ ತಾಲೂಕು ಅಥವಾ ಜಿಲ್ಲಾ ಆಸ್ಪತ್ರೆಗೆ ಬರುವ ಮುನ್ನ ಟೆಲಿ ಮೆಡಿಸಿನ್ ಮಾದರಿಯಲ್ಲಿ ಸೇವೆ ನೀಡಲು ಜಯದೇವ ಆಸ್ಪತ್ರೆ ಸಹಯೋಗದೊಂದಿಗೆ ಹಬ್ & ಸ್ಪೋಕ್ ಮಾದರಿಯಲ್ಲಿ ಮೋಬೈಲ್ ತಂತ್ರಾಮಂಶ ಅಭಿವೃದ್ಧಿಪಡಿಸಲಾಗುತ್ತಿದೆ. ಮುಂದಿನ ೬ ತಿಂಗಳಿನಲ್ಲಿ ಇದು ಜಾರಿಗೆ ಬರಲಿದೆ. ಇದರಿಂದ ಆರೋಗ್ಯ ಕ್ಷೇತ್ರದಲ್ಲಿ ಬಹುದೊಡ್ಡ ಬದಲಾವಣೆ ಕಾಣಬಹುದಾಗಿದೆ ಎಂದರು.
ಆರೋಗ್ಯ ಸೌಧ ನಿರ್ಮಾಣ: ಆರೋಗ್ಯ ಕಚೇರಿಗಳು ಒಂದೇ ಸೂರಿನಡಿ ತರುವ ಉದ್ದೇಶದಿಂದ ಕಲಬುರಗಿ ನಗರದಲ್ಲಿ ನಿರ್ಮಾಣದ ಹಂತದಲ್ಲಿರುವ ಜಯದೇವ ಆಸ್ಪತ್ರೆ ಹಿಂಭಾಗ ೭ ಎಕರೆ ಪ್ರದೇಶದಲ್ಲಿ ೨೮ ಕೋಟಿ ರೂ. ವೆಚ್ಚದಲ್ಲಿ ಆರೋಗ್ಯ ಸೌಧ ನಿರ್ಮಾಣ ಮಾಡಲಾಗುತ್ತಿದೆ. ಇದಕ್ಕೆ ಮಂಡಳಿ ಪ್ರಾದೇಶಿಕ ನಿಧಿಯಡಿ ೧೦ ಕೋಟಿ ಅನುದಾನ ನೀಡಲಿದ್ದು, ಉಳಿದ ಅನುದಾನ ಆರೋಗ್ಯ ಇಲಾಖೆ ಭರಿಸಲಿದೆ ಎಂದು ಡಾ.ಅಜಯ್ ಸಿಂಗ್ ಮಾಹಿತಿ ನೀಡಿದರು.
ಹೈಲೇವಲ್ ಕಮಿಟಿ ರಚನೆ: ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಪ್ರತಿ ವರ್ಷ ಬಿಡುಗಡೆಯಾಗುವ ಸಾವಿರಾರು ಕೋಟಿ ರೂ. ಹಣ ಎಲ್ಲಾ ಕ್ಷೇತ್ರಗಳಲ್ಲಿ ಸಮರ್ಪಕವಾಗಿ ಖರ್ಚು ಮಾಡುವ ಮೂಲಕ ಸುಸ್ಥಿರ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ವಿವಿಧ ಕ್ಷೇತ್ರದ ತಜ್ಞರ ಸಲಹೆ ಪಡೆಯಲು ಹೈ ಲೇವಲ್ ಕಮಿಟಿ ರಚಿಸಲು ನಿರ್ಧರಿಸಿದ್ದು, ಶೀಘ್ರದಲ್ಲಿಯೆ ತಜ್ಞರ ಸಲಹಾ ಸಮಿತಿ ರಚಿಸಲಾಗುವುದು ಎಂದು ಪತ್ರಕರ್ತರ ಪ್ರಶ್ನೆಗೆ ಡಾ.ಅಜಯ್ ಸಿಂಗ್ ಅವರು ಉತ್ತರಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಂಡಳಿ ಕಾರ್ಯದರ್ಶಿ ಎಂ. ಸುಂದರೇಶ ಬಾಬು, ಉಪ ಕಾರ್ಯದರ್ಶಿ ಪ್ರಮೀಳಾ ಎಂ.ಕೆ., ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಡಾ. ಶಂಕರ ಮೈಲಾರೆ ಇದ್ದರು.

WhatsApp Group Join Now
Telegram Group Join Now
Share This Article

Eshanya Times, Regional Kannada Daily is a leading news paper in Kalyana Karnataka (North Karnataka). Which is having large number of circulation in the districts of Raichur, Koppla, Bellary, Yadgir, Gulbarga, Bidar, Vijayanagara, Bagalkote and in the capital city of Bangalore.

This News Paper having Registred Office in Raichur City, Karnataka State.

The main mooto of the Eshanya Times news paper is to serve the nation and to give wide publicity of Government Developmental programmes and policies which are execuited in Government and also to give social justice to the people of Karnataka.

Copyright © 2024. Eshanya Times.  All Rights Reserved,

Powered By KhushiHost
24/7 Help Desk Support – Call Now +919060329333 

error: Content is protected !!